Sunday, April 28, 2024
spot_imgspot_img
spot_imgspot_img

ಯಡಿಯೂರಪ್ಪ ವಿಜಯೇಂದ್ರ ಉಪಸ್ಥಿತಿಯಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾದ ಜನಾರ್ದನ ರೆಡ್ಡಿ.!

- Advertisement -G L Acharya panikkar
- Advertisement -

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

ಶಾಸಕ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಮುನ್ನ 200ಕ್ಕೂ ಅಧಿಕ ಕೆಆರ್‌ಪಿಪಿ ಪದಾಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ್ದರು. ಪಕ್ಷದ ಎಲ್ಲರ ಒಪ್ಪಿಗೆ ಬಳಿಕವೇ ಸೇರ್ಪಡೆ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದರು. ರಾಜ್ಯ ಬಿಜೆಪಿ ನಾಯಕರ ಜೊತೆ ಜೊತೆಗೆ ಗೃಹ ಸಚಿವ ಅಮಿತ್ ಶಾ ಜೊತೆ ಒಂದು ಸುತ್ತಿನ ಮಾತುಕತೆಯನ್ನು ಕೂಡ ಜನಾರ್ಧನ ರೆಡ್ಡಿ ನಡೆಸಿದ್ದರು.

- Advertisement -

Related news

error: Content is protected !!