Friday, April 26, 2024
spot_imgspot_img
spot_imgspot_img

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ – ಕೊನೆಗೂ ಬಯಲಾಯ್ತು ಸಿಡಿಯಲ್ಲಿದ್ದ ಯುವತಿಯ ಗುರುತು

- Advertisement -G L Acharya panikkar
- Advertisement -

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಲೆದಂಡಕ್ಕೆ ಕಾರಣವಾಗಿರುವ ಅಶ್ಲೀಲ ಸಿಡಿಯಲ್ಲಿರುವ ಯುವತಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿಯ ಮನೆ ಮಾಲೀಕರನ್ನು ಹಾಗೂ ಯುವತಿಯನ್ನು ಯಾವುದೇ ಕ್ಷಣದಲ್ಲಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

ಇಂಜಿನಿಯರಿಂಗ್ ಪದವೀಧರೆಯಾಗಿರುವ ಯುವತಿ ಬೆಂಗಳೂರಿನ ರಾಜಾಜಿನಗರದಲ್ಲಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಆರ್.ಟಿ.ನಗರದಲ್ಲಿನ ಮನೆಯೊಂದರಲ್ಲಿ ವಾಸವಾಗಿದ್ದಳು. ಆದರೆ ಮಾರ್ಚ್ 2ರಂದು ಯುವತಿ ಮನೆ ಖಾಲಿ ಮಾಡಿಕೊಂಡು ಹೋಗಿದ್ದಾಳೆ. ಅಲ್ಲದೇ ಅದೇ ದಿನ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಹಳ್ಳಿ ರಾಸಲೀಲೆ ಸಿಡಿಯನ್ನು ಬಿಡುಗಡೆ ಮಾಡಿದ್ದರು. ಇದರ ಬೆನ್ನಲ್ಲೇ ಪೊಲೀಸರು ಯುವತಿಯ ಬೆನ್ನು ಬಿದ್ದಿದ್ರು. ಇದೀಗ ಆರ್.ಟಿ.ನಗರದ ಸಿಂಗಲ್ ಬೆಡ್ ರೂಮ್ ಮನೆಯಲ್ಲಿ ಯುವತಿ ವಾಸವಾಗಿರುವುದು ಖಚಿತವಾಗಿದೆ.

2018ರಿಂದಲೂ ಯುವತಿ ಇದೇ ಮನೆಯಲ್ಲಿ ವಾಸವಾಗಿದ್ದಳು. ಯುವತಿ ಬಿಜಾಪುರ ಮೂಲದವಳು ಎಂದು ತಿಳಿದುಬಂದಿದೆ. ಮನೆ ಮಾಲೀಕರಿಗೆ ನೀಡಲಾಗಿದ್ದ ಮೊಬೈಲ್ ಪೋನ್ ಸ್ವಿಚ್ ಆಪ್ ಆಗಿದೆ. ಯುವತಿಯ ಸ್ನೇಹಿತರು ಆಗಾಗ ಮನೆಗೆ ಬಂದು ಹೋಗ್ತಾ ಇದ್ರು. ಆದರೆ ಯುವತಿಯ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ ಎಂದು ಮನೆ ಮಾಲೀಕರು ತಿಳಿಸಿದ್ದಾರೆ. ಇದೀಗ ಯುವತಿಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪೊಲೀಸರು ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ. ಅಲ್ಲದೇ ಮನೆ ಮಾಲೀಕರರಿಂದಲೂ ಹೆಚ್ಚಿನ ಮಾಹಿತಿ ಪಡೆಯುವ ಸಾಧ್ಯತೆಯಿದೆ. ಒಟ್ಟಿನಲ್ಲಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವೀಸ್ಟ್ ಲಭ್ಯವಾಗುತ್ತಿದೆ.

- Advertisement -

Related news

error: Content is protected !!