ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷರನ್ನಾಗಿ ಹಾಲಪ್ಪ ವರವಿ ಅವರನ್ನು, ಗದಗ ಜಿಲ್ಲೆಯ ನೂತನ ಅಧ್ಯಕ್ಷರನ್ನಾಗಿ ಎನ್ ಸದಾನಂದ ಅಶೋಕ ಅವರನ್ನು ಆಯ್ಕೆಮಾಡಲಾಯಿತು.
ಪರಿಸರವಾದಿಗಳು ಮತ್ತು ಜಯಕರ್ನಾಟಕ ಜನಪರ ವೇದಿಕೆ ಮತ್ತು ಐಕೇರ್ ಬ್ರಿಗೇಡ್ ಸಂಸ್ಥೆಯ ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ, ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪರವರ ಸಲಹೆಯೊಂದಿಗೆ, ರಾಜ್ಯ ಕಾರ್ಯಾಧ್ಯಕ್ಷರಾದ ಅಣ್ಣಪ್ಪ ಓಲೇಕಾರ, ರಾಜ್ಯ ನಿರ್ವಾಹಕರಾದ ಜೆ.ಶ್ರೀನಿವಾಸ ಅವರ ಘನ ಉಪಸ್ಥಿತಿಯಲ್ಲಿ, ಇಂದು ದಿನಾಂಕ : 20-08-2022ರ, ಶನಿವಾರದಂದು, ಜಯಕರ್ನಾಟಕ ಜನಪರ ವೇದಿಕೆಯ ಕೇಂದ್ರ ಕಛೇರಿಯಲ್ಲಿ ಗದಗ ಜಿಲ್ಲಾ ಸಮಿತಿಯ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಮತ್ತು ಗದಗ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳ ಒಮ್ಮತದಿಂದ, ಈ ಸಂದರ್ಭದಲ್ಲಿ ರಾಜ್ಯ ಮಹಾ ಪ್ರಧಾನ ಸಂಚಾಲಕರಾದ ಶೆ.ಭೋ.ರಾಧಾಕೃಷ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಬಾಲಚಂದರ್, ಗೋಪಿ,ರಾಜ್ಯ ಸಂಚಾಲಕರಾದ ರಾಮದಾಸ್ ಶೆಟ್ಟಿ, ರಾಜ್ಯ ಕಾರ್ಯದರ್ಶಿಗಳಾದ ಕಿರಣ್ ಕುಮಾರ್, ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಡಾ|| ಜಿ.ಎಸ್. ಪುಷ್ಪಲತಾ, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಮತಿ ಪದ್ಮಾ ರವರು ಹಾಗೂ ಗದಗ ಜಿಲ್ಲಾ ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ತಾಲ್ಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನವಾಗಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಹಾಲಪ್ಪ ವರವಿ ಹಾಗೂ ಗದಗ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಎನ್.ಸದಾನಂದ ಅಶೋಕ ಅವರಿಗೆ ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರು ಆದೇಶ ಪತ್ರವನ್ನು ವಿತರಿಸಿ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.