Wednesday, May 8, 2024
spot_imgspot_img
spot_imgspot_img

ವಿಟ್ಲ: ವಿಶ್ವ ಹಿಂದೂ ಪರಿಷತ್ ಪ್ರಖಂಡದ ಉಪಾಧ್ಯಕ್ಷ ಜಯಕೊಟ್ಟಾರಿ ಮೇಲೆ ಅನ್ಯಕೋಮಿನ ತಂಡದಿಂದ ಹಲ್ಲೆ; ದೂರು ದಾಖಲು

- Advertisement -G L Acharya panikkar
- Advertisement -

ಕ್ಷುಲ್ಲಕ ಕಾರಣಕ್ಕೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ನಡೆದಿದೆ. ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡದ ಉಪಾಧ್ಯಕ್ಷ ಜಯ ಕೊಟ್ಟಾರಿ ಮೇಲೆ ಓಕ್ಕೆತ್ತೂರು ಮುಸ್ಲಿಂ ತಂಡದಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.

ನಿನ್ನೆ ತಡರಾತ್ರಿ ಒಕ್ಕೆತ್ತೂರಿನಲ್ಲಿ ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡದ ಉಪಾಧ್ಯಕ್ಷ ಜಯ ಕೊಟ್ಟಾರಿ ಅವರು ಚಲಿಸುತ್ತಿದ್ದ ರಿಟ್ಝ್ ಕಾರು ಹಾಗೂ ಆಟೋ ರಿಕ್ಷಾದ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಅಲ್ಲಿದ್ದ ಯುವಕರ ತಂಡವು ಜಯ ಕೊಟ್ಟಾರಿ ಅವರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ.

ಕ್ಷುಲ್ಲಕ ಕಾರಣವೊಡ್ಡಿ ಹಲ್ಲೆ ನಡೆಸಿದ್ದನ್ನು ವಿಶ್ವ ಹಿಂದೂ ಪರಿಷತ್ ವಿಟ್ಲ ಪ್ರಖಂಡ ತೀವ್ರವಾಗಿ ಖಂಡಿಸಿದೆ. ಅಪಘಾತ ನಡೆದ ಸ್ಥಳದಲ್ಲಿ ಈ ಹಿಂದೆಯೂ ಗುಂಪುಗಟ್ಟಿಕೊಂಡು ಬೆದರಿಸಿದ ಪ್ರಕರಣ ಅನೇಕ ನಡೆದಿತ್ತು. ನಿನ್ನೆ ನಮ್ಮ ಕಾರ್ಯಕರ್ತರಿಗೆ ಹಲ್ಲೆ ನಡೆಸಿದ್ದು ಖಂಡನೀಯ ಎಂದು ವಿ.ಹಿಂ.ಪ ವಿಟ್ಲ ಪ್ರಖಂಡ ಇದರ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಕಾರ್ಯಾಧ್ಯಕ್ಷ ಪದ್ಮನಾಭ ಕಟ್ಟೆ, ಕಾರ್ಯದರ್ಶಿ ಚರಣ್ ಕಾಪುಮಜಲು, ಬಜರಂಗದಳದ ಸಂಚಾಲಕ ಮಿಥುನ್ ಪೂಜಾರಿ ಕಲ್ಲಡ್ಕ, ಸಹಸಂಚಾಲಕ್ ಚಂದ್ರಹಾಸ್ ಕನ್ಯಾನ, ಸಹಸುರಕ್ಷಾ ಪ್ರಮುಖ್ ದೇವದಾಸ್ ಕಾಪುಮಜಲು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!