ಪುತ್ತೂರಿನ ಮುಖ್ಯರಸ್ತೆಯ ಜಿ.ಎಲ್. ಆಚಾರ್ಯ ಕಾಂಪ್ಲೆಕ್ಸ್ನಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರವರೆಗೆ ನಡೆಯಲಿರುವುದು. ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ.
ಬಂಗಾರದ ಚೈನ್ ಖರೀದಿಗೆ VA 6% ನಿಂದ ಆರಂಭ, ಜಂಟ್ಸ್ ಕಡ ಖರೀದಿಗೆ VA 6%ನಿಂದ ಆರಂಭ, ಆ್ಯಂಟಿಕ್ ಜ್ಯುವೆಲ್ಲರ್ಸ್ ಖರೀದಿಗೆ VA 15% ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8% ನಿಂದ ಆರಂಭ. ಗ್ರಾಹಕರಿಗೆ ನವರಾತ್ರಿಯ ಈ ಹಬ್ಬದ ಋತುವಿನಲ್ಲಿ ಚಿನ್ನಭರಣಗಳನ್ನು ಖರೀದಿಸಿ 9 ಚಿನ್ನದ ನಾಣ್ಯಗಳನ್ನು ಗೆಲ್ಲುವ ಅಮೂಲ್ಯ ಅವಕಾಶವಿದೆ ಹಾಗೂ ಸ್ವರ್ಣ ಹಬ್ಬದ ಪ್ರತಿ ಖರೀದಿಯ ಮೇಲೆ ವಿಶೇಷ ರಿಯಾಯಿತಿ ಪಡೆಯುವ ಅವಕಾಶವಿದೆ.
ವಿಶ್ವಾಸ, ಪರಿಶುದ್ದತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ ಹಾಗೂ ಈ ಜಿ.ಎಲ್. ಸ್ವರ್ಣ ಹಬ್ಬ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.