- Advertisement -
- Advertisement -
ಮುಂಬೈ: ಮುಂಬೈ ಸಮುದ್ರದಲ್ಲಿ ಬಾರ್ಜ್ ಹಡಗು ದುರಂತದಲ್ಲಿ ಮೃತಪಟ್ಟ ಸಿಬ್ಬಂದಿಗಳಲ್ಲಿ ಮತ್ತೆ 10 ಮೃತದೇಹಗಳನ್ನು ಭಾರತೀಯ ನೌಕಾಪಡೆ ಹೊರತೆಗೆದಿದ್ದು, 61 ಮಂದಿ ಮೃತಪಟ್ಟಿರುವುದು ದೃಢವಾಗಿದೆ.
ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳ ನಂತರ 61ರ ಪೈಕಿ 26 ಮೃತದೇಹಗಳನ್ನು ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಆದರೆ ಬೋಟ್ ದುರಂತ ನಡೆದು ಐದು ದಿನಗಳು ಕಳೆದಿದ್ದು, ಸಾಕಷ್ಟು ಶವಗಳು ಕೊಳೆತ ಮತ್ತು ಗುರುತಿಸಲಾಗದ ಸ್ಥಿತಿಯಲ್ಲಿ ಪತ್ತೆಯಾಗುತ್ತಿವೆ. ಹೀಗಾಗಿ ಸಂಬಂಧಿಕರ ಡಿಎನ್ಎ ಮಾದರಿಯನ್ನು ಪಡೆಯಲಾಗುತ್ತಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಮೇ 17ರಂದು ತೌಕ್ತೆ ಚಂಡಮಾರುತದ ಆರ್ಭಟದಿಂದಾಗಿ ಮುಂಬೈ ತಟದ ಅರಬ್ಬೀ ಸಮುದ್ರದಲ್ಲಿ ಬೋಟ್ ಕೊಚ್ಚಿಹೋಗಿತ್ತು. ನೌಕೆಯಲ್ಲಿದ್ದ 261 ಜನರ ಪೈಕಿ 188 ಮಂದಿಯನ್ನು ರಕ್ಷಿಸಲಾಗಿದ್ದು, ಈವರೆಗೆ 61 ಜನರ ಮೃತದೇಹ ಸಿಕ್ಕಿದೆ. ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
- Advertisement -