


ಕೆಲ ದಿನಗಳ ಹಿಂದೆ ಸಂಶಯಾಸ್ಪದವಾಗಿ ಯುವತಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಮೃತಪಟ್ಟ ಯುವತಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಇದು ಆತ್ಮಹತ್ಯೆ ಎಂದೇ ಪೊಲೀಸರು ಪರಿಗಣಿಸಿದ್ದರು. ಮಗಳ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದದ್ದು ,ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೇವಲ 2 ಸಾವಿರ ರೂಪಾಯಿ ವಿಚಾರಕ್ಕೆ ಅಪ್ರಾಪ್ತ ಬಾಲಕನೊಬ್ಬ ಯುವತಿಯ ಕೊಲೆ ಮಾಡಿದ್ದಾನೆ ಎಂಬ ವಿಚಾರ ತನಿಖೆಯಿಂದ ಹೊರಬಿದ್ದಿದೆ.
ಆರೋಪಿ ಬಾಲಕ ತನ್ನ ಸ್ನೇಹಿತನ ಕನ್ನಡಕ ಡ್ಯಾಮೇಜ್ ಮಾಡಿದ್ದ. ಇದನ್ನು ರಿಪೇರಿ ಮಾಡಿಸಿಕೊಡುವಂತೆ ಸ್ನೇಹಿತ ಪಟ್ಟು ಹಿಡಿದಿದ್ದ. ಹಾಗಾಗಿ ಅಪ್ರಾಪ್ತ, ಪ್ರಬುದ್ಧ್ಯಾ ಮನೆಗೆ ಬಂದಿದ್ದ. ಹೀಗೆ ಬಂದವನೇ ಪ್ರಭುದ್ಯಾ ಪರ್ಸ್ನಿಂದ 2 ಸಾವಿರ ರೂ. ಎಗರಿಸಿದ್ದಾನೆ.
ಇದು ಪ್ರಭುದ್ಧ್ಯಾ ಗಮನಕ್ಕೆ ಬಂದಿದ್ದು, ಆಕೆ ಬಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಆಗ ಬಾಲಕ, ತಪ್ಪಾಯ್ತು ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದಾನೆ. ಹೀಗೆ ಕಾಲು ಹಿಡಿದಾಗ ಪ್ರಭುದ್ಧ್ಯಾ ಆಯತಪ್ಪಿ ಬಿದ್ದಿದ್ದಾಳೆ.
ಕೆಳಗಡೆ ಬಿದ್ದ ಕಾರಣ ಆಕೆಯ ತಲೆಗೆ ಬಲವಾದ ಪೆಟ್ಟು ಬಿದ್ದು ಮೂರ್ಛೆ ಹೋಗಿ ಪ್ರಜ್ಞೆ ತಪ್ಪಿದ್ದಾಳೆ. ಇದರಿಂದ ಭಯಗೊಂಡ ಬಾಲಕ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಯುವತಿ ಕೈ ಕುಯ್ದಿದ್ದಾನೆ. ಇದರಿಂದ ರಕ್ತಸ್ರಾವ ಆಗಿ ಪ್ರಭುಧ್ಯಾ ಸಾವನ್ನಪ್ಪಿದ್ದಾಳೆ ಎಂಬ ವಿಚಾರ ಬಹಿರಂಗವಾಗಿದೆ. ಪ್ರಕರಣದ ಅಪ್ರಾಪ್ತನನ್ನು ಅರೆಸ್ಟ್ ಮಾಡಲಾಗಿದೆ.