Saturday, May 18, 2024
spot_imgspot_img
spot_imgspot_img

ಬಹರೈನ್ : ಕೆ.ಸಿ.ಎಫ್ ಫೌಂಡೇಶನ್ ಡೇ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

- Advertisement -G L Acharya panikkar
- Advertisement -

ಬಹರೈನ್ :“ಸತ್ಯ-ಸಹನೆ-ಸಮರ್ಪಣೆ” ಘೋಷ ವಾಕ್ಯದೊಂದಿಗೆ ಕೆ.ಸಿ.ಎಫ್ ಫೌಂಡೇಶನ್ ಡೇ ಪ್ರಯುಕ್ತ ವೈವಿಧ್ಯ ಮಯ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಸಿಎಫ್ ಬಹರೈನ್ ತೀರ್ಮಾನಿಸಿದ್ದು ಅದರ ಭಾಗವಾಗಿ ಬೃಹತ್ ರಕ್ತದಾನ ಶಿಬಿರವು ಸಲ್ಮಾನಿಯ ಮೆಡಿಕಲ್ ಸೆಂಟರ್ ನಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು.

ಫೆಬ್ರವರಿ 5 ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಅಬ್ದುಲ್ ಖಾದರ್ ಉಸ್ತಾದ್ ರವರ ದುಃಆ ಮೂಲಕ ಆರಂಭಗೊಂಡ ಶಿಬಿರದಲ್ಲಿ ಕೆಸಿಎಫ್ ನ ಕಾರ್ಯ ಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.


ಕೆಸಿಎಫ್ ಬಹರೈನ್ ನ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನಡೆಯಿತು.
ಕೆಸಿಎಫ್ ಬಹರೈನ್ ಸೌತ್ ಝೋನ್ ಇದರ ಸಂಘಟನಾ ವಿಭಾಗದ ಕಾರ್ಯದರ್ಶಿ ಶಾಫಿ ಕಂಬಳಬೆಟ್ಟುರವರ ನೇತೃತ್ವದಲ್ಲಿ ನಡೆದ ಶಿಬಿರವು ಕೋವಿಡ್ ನ ಎಲ್ಲಾ ಮಾನದಂಡಗಳನ್ನು ಪಾಲಿಸಿ ಬಹಳ ಅಚ್ಚುಕಟ್ಟಾಗಿ ಶಿಸ್ತಿನಿಂದ ನಡೆಸಿದ ಕಾರ್ಯವೈಖರಿಯನ್ನು ಕಂಡು ಸಲ್ಮಾನಿಯ ಮೆಡಿಕಲ್ ಸೆಂಟರ್ ನ ಅಧಿಕಾರಿಗಳು ಸಂಘಟಕರನ್ನು ಪ್ರಶಂಶಿಸಿದರು.


ಶಿಬಿರದ ಉಸ್ತುವಾರಿಯನ್ನು ಕೆಸಿಎಫ್ ಬಹರೈನ್ ಸಾಂತ್ವನ ವಿಭಾಗದ ನೇತಾರರಾದ ಕರೀಮ್ ಉಚ್ಚಿಲ್ ,ಹನೀಫ್ ಜಿಕೆ ಹಾಗೂ ಮಜೀದ್ ಝುಹ್ರಿ ವಹಿಸಿದ್ದರು. ಶಿಬಿರಾರ್ಥಿಗಳಿಗೆ ಬರಲು ವಾಹನ ಸೌಕರ್ಯಗಳನ್ನು ಒದಗಿಸಲಾಯಿತು ಹಾಗೂ ಬೆಳಗ್ಗಿನ ಲಘು ಫಲಹಾರ ಜೊತೆಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಪ್ರತೀ ರಕ್ತಧಾನಿಗಳಿಗೆ ಕೆಸಿಎಫ್ ಬಹರೈನ್ ವತಿಯಿಂದ ಮೆಚ್ಚುಗೆ ಪ್ರಮಾಣ ಪತ್ರ ಗಳನ್ನು ನೀಡಲಾಯಿತು.
ಶಿಬಿರದಲ್ಲಿ ಕೆಸಿಎಫ್ ಬಹರೈನ್ ನ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಪ್ರಭಾರ ಕೋಶಾಧಿಕಾರಿ ಸೂಫಿ ಪಯಂಬಚಾಲ್,ಸಂಘಟನಾ ವಿಭಾಗದ ಅಧ್ಯಕ್ಷರಾದ ಕಲಂದರ್ ಮುಸ್ಲಿಯಾರ್ ಕಕ್ಕೆಪದವು ಕಾರ್ಯದರ್ಶಿ ಸಮದ್ ಉಜಿರೆಬೆಟ್ಟು, ಶಿಕ್ಷಣ ವಿಭಾಗದ ಕಾರ್ಯದರ್ಶಿ ಅಶ್ರಫ್ ರೆಂಜಾಡಿ,ಪ್ರಕಾಶನ ವಿಭಾಗದ ಕಾರ್ಯದರ್ಶಿ ತೌಫೀಕ್ ಬೆಳ್ತಂಗಡಿ ಹಾಗೂ,ಝೋನ್ ಮತ್ತು ಸೆಕ್ಟರ್ ಗಳ ನೇತಾರರು, ಬಹರೈನ್ ನ ವಿವಿಧ ಸಂಘಟನೆಗಳ ಸಾರಥಿಗಳು ಭಾಗವಹಿಸಿದ್ದರು.

- Advertisement -

Related news

error: Content is protected !!