- Advertisement -
- Advertisement -
ಎಸ್.ಡಿ.ಪಿ.ಐ ಕೇರಳ ರಾಜ್ಯ ಸಮಿತಿಯ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಕೊಲೆಯ ದರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳ ಪತ್ತೆ ಪೊಲೀಸರು ಮುಂದಾಗಿದ್ದಾರೆ. ಎಸ್.ಡಿ.ಪಿ.ಐ ಕೇರಳ ರಾಜ್ಯ ಸಮಿತಿ ಸದಸ್ಯ ಕೆ.ಎಸ್. ಶಾನ್ ಅವರ ಮೇಲೆ ಮಣ್ಣಂಚೇರಿ ಎಂಬಲ್ಲಿ ವಾಹನದಿಂದ ಡಿಕ್ಕಿ ಹೊಡೆಸಿದ ಕಿರಾತಕರು ನಂತರ ಮಾರಕಾಯಧಗಳಿಂದ ದಾಳಿ ನಡೆಸಿದ್ದಾರೆ.
ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಶಾನ್ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ನಿಧನ ಹೊಂದಿದ್ದಾರೆ ಎನ್ನಲಾಗಿದೆ.
- Advertisement -