- Advertisement -
- Advertisement -





ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ(50) ಅವರ ಪುತ್ರನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾ.18ರಂದು ಸಂಜೆ, ಬಾಲಕನು ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದ ಎಂದು ತಿಳಿದುಬಂದಿದೆ.
ತಕ್ಷಣವೇ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಬಾಲಕನ ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








