





ಕಡಬ: ಚಲಿಸುತ್ತಿದ್ದ ಸ್ಕೂಟರ್ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸುಬ್ಬಣ ಗೌಡ ಎಂಬವರ ಮಗ ಸೀತಾರಾಮ (58) ಎಂದು ಗುರುತಿಸಲಾಗಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ. ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ.
ಸೀತಾರಾಮ ಚಲಿಸುತಿದ್ದ ಸ್ಕೂಟರ್ಗೆ ಬೃಹತ್ ಧೂಪದ ಮರ ಏಕಾಏಕಿ ಉರುಳಿದ್ದು, ಕ್ಷಣ ಮಾತ್ರದಲ್ಲಿ ಸೀತಾರಾಮರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಅರಣ್ಯ ಇಲಾಖೆಯ ಅಸಡ್ಡೆ ವಿರುದ್ಧ ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದು ಈ ಮರದ ಬಗ್ಗೆ ಅನೇಕ ಸಲ ಗಮನಕ್ಕೆ ತಂದರೂ ಕಾರ್ಯ ಪ್ರವರ್ತರಾಗದ ಇಲಾಖೆ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಇದೀಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳಬೇಕಾತ್ತು ಎಂದಿದ್ದಾರೆ.
ಸೀತಾರಾಮರವರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್ ಆಗಿದ್ದು ಕಡಬದಿಂದ ಹರಕೆಗೆ ಕೋಳಿ ಖರೀದಿ ಮಾಡಿ ಮನೆಗೆ ಬರುತ್ತಿರುವಾಗ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿದ್ದಾರೆ.