Wednesday, April 23, 2025
spot_imgspot_img
spot_imgspot_img

ಕಡಬ: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಕಡಬ: ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೋರ್ವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕಡಬದಲ್ಲಿ ನಡೆದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿ ಮನೆ ಚೆನ್ನಕೇಶವ ಜೋಗಿ (61) ಎಂದು ಗುರುತಿಸಲಾಗಿದೆ.

ಮಾ.11 ರಂದು ತನ್ನ ಮನೆಯಿಂದ ಕೋಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋಗುವುದಾಗಿ ಹೋದವರು ಇಲ್ಲಿಯ ತನಕ ಹಿಂತಿರುಗಿ ಬರಲಿಲ್ಲ. ಇವರ ಬಳಿ ಇದ್ದ ಮೊಬೈಲ್ ಸಂಖ್ಯೆ ಸ್ವಿಚ್ ಆಫ್ ಎಂದು ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯಿಂದ ಹೊರ ಹೋಗುವ ವೇಳೆ ಉದ್ದ ತೋಳಿನ ಹಸಿರು ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಮಲಯಾಳಂ ಭಾಷೆ ಮಾತನಾಡುತ್ತಾರೆ. ಮಾಹಿತಿ ಸಿಕ್ಕಿದಲ್ಲಿ ಸುಬ್ರಹ್ಮಣ್ಯ ಠಾಣೆಗೆ ತಿಳಿಸುವಂತೆ ಕೋರಲಾಗಿದೆ .

ನಾಪತ್ತೆಯಾದ ಚೆನ್ನಕೆಶವ ಅವರ ಮಗ ಚಿತ್ತರಂಜನ್ ಅವರು ನೀಡಿದ ದೂರಿನಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!