Saturday, June 28, 2025
spot_imgspot_img
spot_imgspot_img

ಕಡಬ: ಕಾಲು ಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು..!

- Advertisement -
- Advertisement -

ಕಡಬ: ಯುವಕನೋರ್ವ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ.

ಉಮೇಶ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಮುಂದೆ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!