- Advertisement -
- Advertisement -
ಕಡಬ: ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕು ಗ್ರಾಮ ಬೂದಿಹಾಳದ ವಾರೆಂಟ್ ಆಸಾಮಿ ನಿಂಗಪ್ಪ ಎಂದು ಗುರುತಿಸಲಾಗಿದೆ.
ನ್ಯಾಯಾಲಯಕ್ಕೆ ಹಾಜರಾಗದೇ 1 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇತನನ್ನು ಕಡಬ ಠಾಣಾ ಪೊಲೀಸರು ಮೈಸೂರು ತಾಲೂಕು ಬಿರುಹುಂಡಿ ಎಂಬಲ್ಲಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.
- Advertisement -