ಕಡಬ: ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಕಡಬ ತಾಲೂಕು ಕಡಬ ಗ್ರಾಮದ ಕಳಾರ ಎಂಬಲ್ಲಿ ಮಹಮ್ಮದ್ ಇಸ್ಮಾಯಿಲ್ ರವರ ಪಾಳು ಬಿದ್ದ ಮನೆಯ ಹಿಂಬದಿಯ ಶೆಡ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದು, ಮೂವರು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಓರ್ವ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಪರವಾನಿಗೆ ಇಲ್ಲದೇ ದನದ ಕರುವನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳದಲ್ಲಿದ್ದ ಪ್ಲಾಸ್ಟೀಕ್ ಟಾರ್ಪಾಲಿನಲ್ಲಿದ್ದ ಸುಮಾರು 40 ಕೆ.ಜಿಯಷ್ಟು ದನದ ಮಾಂಸ, ದನದ ನಾಲ್ಕು ಕಾಲುಗಳು (ಕಳೆಬರಹ), ಎಲೆಕ್ಟ್ರಾನಿಕ್ ತೂಕಮಾಪನ-1, ಕಬ್ಬಿಣದ ಸತ್ತಾರ್ ಕತ್ತಿಗಳು-2, ಕಬ್ಬಿಣದ ಚೂರಿಗಳು-3, ಕಾಟು ಮರದ ತುಂಡು-1, ಶೆಡ್ ನ ಹೊರಗಡೆ ಕಟ್ಟಿ ಹಾಕಿದ್ದ ನಾಲ್ಕು ಕರುಗಳನ್ನು ವಶಕ್ಕೆ ಪಡೆದಿದ್ದಾರೆ.
ಸ್ವಾಧೀನಪಡಿಸಿಕೊಂಡ ವಧೆ ಮಾಡಿದ ದನ ಕರುವಿನ ಮಾಂಸ ಹಾಗೂ ಜೀವಂತ ದನದ ಕರುಗಳ ಅಂದಾಜು ಮೌಲ್ಯ 19,500/- ಆಗಬಹುದು. ಪರಾರಿಯಾದ ಆರೋಪಿಗಳನ್ನು ಮಹಮ್ಮದ್ ಶರೀಫ್ ಮತ್ತು ಮಹಮ್ಮದ್ ಮುಸ್ತಫರವರು ಎನ್ನಲಾಗಿದೆ.