- Advertisement -
- Advertisement -
ಕಡಬ: ಸಾಲ ಬಾಧೆಯಿಂದ ಮನನೊಂದು ಕೃಷಿಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಕೃಷಿಕ ಬೂಡಲೂರು ನಿವಾಸಿ ಶಿವಣ್ಣ ಗೌಡ(61) ಎಂದು ಗುರುತಿಸಲಾಗಿದೆ.
ತನ್ನ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ . ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಾಗಿ ರೂ.10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ.
ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಹೇಮಂತ್ ಅವರು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -