Thursday, May 2, 2024
spot_imgspot_img
spot_imgspot_img

ನಾಪತ್ತೆಯಾಗಿದ್ದ ಅಂಗಡಿ ಮಾಲಿಕ ಅಸ್ವಸ್ಥರಾಗಿ ಪತ್ತೆ; ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

- Advertisement -G L Acharya panikkar
- Advertisement -
vtv vitla

ಕಡಬ ತಾಲೂಕಿನ ರಾಮಕುಂಜ ಹಳೆನೇರೆಂಕಿ ಗ್ರಾಮದಲ್ಲಿ ದಿನಸಿ ಅಂಗಡಿ ಹೊಂದಿದ್ದ ಅಂಗಡಿ ಮಾಲಿಕ ನಾಪತ್ತೆಯಾಗಿ ಬಿಸಿರೋಡ್ ನಲ್ಲಿ ಅಸ್ಪಸ್ಥರಾಗಿ ಪತ್ತೆಯಾಗಿದ್ದು ಬಳಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65ವ.)ಯವರು ಅ.3 ರಂದು ನಾಪತ್ತೆಯಾಗಿ ಅ.4ರಂದು ಮಧ್ಯಾಹ್ನದ ವೇಳೆಗೆ ಬಿ.ಸಿ.ರೋಡ್‌ನ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದರು. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಹಳೆನೇರೆಂಕಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಇವರು ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.3ರಂದು ಮಧ್ಯಾಹ್ನ ಮೊಬೈಲ್ ಅನ್ನು ಅಂಗಡಿಯಲ್ಲೇ ಬಿಟ್ಟು ತೆರಳಿದ್ದ ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಹಾಗೂ ಇತರೆಡೆ ಹುಡುಕಾಟ ನಡೆಸಿದ್ದ ಮನೆಯವರು ಉಪ್ಪಿನಂಗಡಿ ಪೊಲೀಸ್ ಠಾಣೆಗೂ ಮಾಹಿತಿ ನೀಡಿದ್ದರು. ಪತ್ತೆಯಾಗದ ಹಿನ್ನೆಲೆಯಲ್ಲಿ ಅ.4ರಂದು ಬೆಳಿಗ್ಗೆ ಮನೆಯವರು ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಈ ಮಧ್ಯೆ ಮಧ್ಯಾಹ್ನದ ವೇಳೆಗೆ ಹರೀಶ್ ಅವರು ಅಂಗಡಿಯಲ್ಲಿಯೇ ಬಿಟ್ಟು ಹೋಗಿದ್ದ ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿಯೋರ್ವರು ಹರೀಶ್ ಪೂಜಾರಿಯವರು ಬಿ.ಸಿ.ರೋಡ್ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಮನೆಯವರು ಬಿ.ಸಿ.ರೋಡ್‌ಗೆ ಹೋಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!