Monday, April 29, 2024
spot_imgspot_img
spot_imgspot_img

ಕಡಬ: ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಸ್ನೇಹ ಸಂಪಾದಿಸಿ ಪಂಗನಾಮ; ಲಕ್ಷಾಂತರ ಹಣ ಕಳೆದುಕೊಂಡ ಸ್ಥಳೀಯರು!

- Advertisement -G L Acharya panikkar
- Advertisement -

ಕಡಬ: ಕಡಬದ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಮೈಸೂರಿನ ವ್ಯಕ್ತಿಯೊಬ್ಬ ಸ್ಥಳೀಯರಿಂದ ಸಾಲಪಡೆದು ಪರಾರಿಯಾಗಿರುವ ಘಟನೆ ನಡೆದಿದೆ. ಮೈಸೂರು ಪಿರಿಯಾಪಟ್ಟಣ ನಿವಾಸಿ ಶರತ್ ಬಾಬು ಎಂಬಾತನೇ ಪರಾರಿಯಾದ ವ್ಯಕ್ತಿ.

ಸ್ಥಳೀಯರೊಂದಿಗೆ ಸ್ನೇಹ ಸಂಪಾದಿಸಿ ಲಕ್ಷಾಂತರ ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದಾನೆ. ವಂಚನೆಗೊಳಗಾದ ವ್ಯಕ್ತಿಗಳು ಈತನ ಮೂಲ ಹುಡುಕಿದಾಗ ಈತ ಮನೆ ಬಿಟ್ಟು 10 ವರ್ಷಗಳೇ ಕಳೆದಿವೆ ಎಂದು ತಿಳಿದು ಬಂದಿದೆ. ಹೊಸದಾಗಿ ಆರಂಭವಾದ ಹೋಟೆಲ್ ನಲ್ಲಿ ಅಡುಗೆ ಕೆಲಸಗಾರನಾಗಿ ಸೇರಿಕೊಂಡು ಮಾಲಕರ ಸ್ನೇಹ ಸಂಪಾದಿಸಿದ್ದಾನೆ.

ಸ್ಥಳೀಯವಾಗಿ ಉನ್ನತ ಸ್ಥಾನದಲ್ಲಿ ಇರುವ ಹಲವಾರು ಜನರನ್ನು ತನ್ನ ಮಾತಿನ ಮೋಡಿಯ ಮೂಲಕ ವಂಚಿಸಿ ಹಣ ಚಿನ್ನಾಭರಣಗಳು, ವಾಹನ, ಎಲೆಕ್ಟ್ರಾನಿಕ್ ವಸ್ತುಗಳು ಸೇರಿ ಸುಮಾರು ಹತ್ತು ಲಕ್ಷದ ವಸ್ತುಗಳೊಂದಿಗೆ ಪರಾರಿಯಾಗಿದ್ದಾನೆ.

- Advertisement -

Related news

error: Content is protected !!