Friday, June 27, 2025
spot_imgspot_img
spot_imgspot_img

ಕಡಬದಲ್ಲಿ ಮತ್ತೆ ಸಲಗನ ಅಟ್ಟಹಾಸ..! ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಗೆ ಗಾಯ

- Advertisement -
- Advertisement -

ಕಡಬ: ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಮತ್ತೆ ಕಾಡಾನೆ ದಾಳಿ ನಡೆಸಿದ್ದು ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲಸಕ್ಕೆ ಹೋಗುತ್ತಿದ್ದ ವೇಳೆ ವಿಜುಕುಮಾರ್ ಎಂಬ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಇನ್ನು ಗಾಯಗೊಂಡ ವಿಜುಕುಮಾರ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ. ಇದೇ ಪರಿಸರದಲ್ಲಿ ಎರಡು ಆನೆಗಳು ಇರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ. ಗ್ರಾಮಸ್ಥರು, ಸುಬ್ರಹ್ಮಣ್ಯ-ಧರ್ಮಸ್ಥಳ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

- Advertisement -

Related news

error: Content is protected !!