Friday, April 26, 2024
spot_imgspot_img
spot_imgspot_img

ಎಸ್‌ಡಿಪಿಐ ಆತೂರು ವಲಯದ ವತಿಯಿಂದ ಲೋ ವೋಲ್ಟೇಜ್ ಸಮಸ್ಯೆ ಬಗೆ ಹರಿಸುವಂತೆ ಮೆಸ್ಕಾಂಗೆ ಮನವಿ

- Advertisement -G L Acharya panikkar
- Advertisement -

ಕಡಬ: ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ ನಿರಂತರವಾಗಿ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು. ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ ಹಲವಾರು ವರ್ಷಗಳಿಂದ ಮೆಸ್ಕಾಂಗೆ ಎಸ್‌ಡಿಪಿಐ ಸೇರಿದಂತೆ ಹಲವಾರು ನಾಗರಿಕರು ಮನವಿ ಸಲ್ಲಿಸಿದ್ದರು.

ಈ ಬಗ್ಗೆ ಮೆಸ್ಕಾಂ ಗಣನೆಗೆ ತೆಗೆದುಕೊಳ್ಳದ ಕಾರಣ ಸಮಸ್ಯೆ ಮತ್ತಷ್ಟು ದ್ವಿಗುಣಗೊಂಡಿದ್ದು ಮನೆಯ ವಿದ್ಯುತ್ ಉಪಕರಣ ಸೇರಿದಂತೆ, ಕೃಷಿಯನ್ನೇ ಅವಲಂಬಿತರಾದ ರೈತರಿಗೆ ಪಂಪ್ ಸೆಟ್ ಮೂಲಕ ತೋಟಕ್ಕೆ ನೀರು ಹಾಯಿಸಲು ಕೂಡಾ ಕಷ್ಟಕರವಾಗಿದ್ದರಿಂದ ಹಲವಾರು ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಮೆಸ್ಕಾಂ ಇಲಾಖೆ ಶೀಘ್ರ ಸ್ಪಂದಿಸದಿದ್ದಲ್ಲಿ ಎಸ್‌ಡಿಪಿಐ ಪಕ್ಷವು ಗ್ರಾಮದ ಮತ್ತು ಊರಿನ ನಾಗರಿಕರ ಜೊತೆಗೂಡಿ ಮೆಸ್ಕಾಂಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಡಬ ತಾಲೂಕು ಜೊತೆ ಕಾರ್ಯದರ್ಶಿ ಬಶೀರ್ ಹಲ್ಯಾರ, ಎಸ್‌ಡಿಪಿಐ ಆತೂರು ವಲಯಾಧ್ಯಕ್ಷ ಇಸ್ಮಾಯಿಲ್ ಆತೂರು, ಎಸ್‌ಡಿಪಿಐ ವಲಯ ಸಮಿತಿ ಸದಸ್ಯ ಶರೀಫ್ ಬಿಎಸ್ ಮುಂತಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!