Monday, May 6, 2024
spot_imgspot_img
spot_imgspot_img

ಕಡಬ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು..!

- Advertisement -G L Acharya panikkar
- Advertisement -

ಕಡಬ: ಇಲ್ಲಿನ ದುರ್ಗಾಂಬಿಕ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವರು ಹಲವು ವರ್ಷಗಳಿಂದ ಹೂವಿನ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿ ಕಡಬದ ಹೊಯ್ಗೆಕೆರೆ ನಿವಾಸಿ ರಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಹಲವು ಸಮಯಗಳಿಂದ ಮಾರಕ ಕಾಯಿಲೆಗೆ ತುತ್ತಾಗಿದ್ದ ಇವರು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಮಾ.14 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಉತ್ಸಾಹಿ ಯುವಕರ ಕಾರುಣ್ಯ ಸೇವಾ ಬಳಗ , ಬದುಕು ಕಟ್ಟೋಣ ತಂಡ ಸೇರಿದಂತೆ ಹಲವು ಸಾಮಾಜಿಕ ಸಂಘಟನೆಗಳು ಆರ್ಥಿಕ ನೆರವು ನೀಡಿದ್ದವು.

- Advertisement -

Related news

error: Content is protected !!