Saturday, June 28, 2025
spot_imgspot_img
spot_imgspot_img

ಕಡಬ: ಹೃದಯಾಘಾತದಿಂದ ವ್ಯಕ್ತಿ ಸಾವು..!

- Advertisement -
- Advertisement -

ಕಡಬ: ರಜೆಯಲ್ಲಿ ಊರಿಗೆ ಬಂದಿದ್ದ ವಿದೇಶದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಡಬ ತಾಲೂಕು ಚಾರ್ವಾಕ ಗ್ರಾಮದ ದೇವಿನಗರ ನಿವಾಸಿ ದೇಜಪ್ಪ ಯಾನೆ ದಿವೀಶ್ ಮಡಿವಾಳ (45) ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೃತರು ಪುತ್ತೂರಿನ ಸಂಪ್ಯದಲ್ಲಿ ಮನೆ ಮಾಡಿದ್ದರು. ಚಾರ್ವಾಕದ ಮೂಲ ಮನೆಯಲ್ಲಿ ದೈವಗಳ ಕಾರ್ಯಕ್ರಮದ ನಿಮಿತ್ತ ಅಲ್ಲಿಗೆ ಬಂದವರು ನಿನ್ನೆ ರಾತ್ರಿಯೇ ಪುತ್ತೂರಿಗೆ ಬಂದಿದ್ದರು. ಬೆಳಗಿನ ಜಾವ ಹೃದಯಾಘಾತವಾದ ತ ಕ್ಷಣ ಪುತ್ತೂರಿನ ಪುಗತಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರು ಡಿ.28ರಂದು ವಿದೇಶಕ್ಕೆ ಹೋಗುವವರಿದ್ದರು. ಮೃತರು ತಂದೆ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವನ್ನು ಅಗಲಿದ್ದಾರೆ.

- Advertisement -

Related news

error: Content is protected !!