Friday, May 3, 2024
spot_imgspot_img
spot_imgspot_img

ಕಡಬ: ಮಾನಸಿಕವಾಗಿ ಮನನೊಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಕಡಬ:ವ್ಯಕ್ತಿಯೋರ್ವರು ಮಕ್ಕಳಾಗಲಿಲ್ಲವೆಂದು ಮನನೊಂದು ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ಕಾಣಿಯೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕಾಣಿಯೂರು ಗ್ರಾಮದ ಅಬ್ಬಡದ ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ.

ಕಳೆದ 20 ವರ್ಷಗಳ ಹಿಂದೆ ವಿವಾಹವಾಗಿದ್ದು, ಆದರೆ ಅವರಿಗೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲವೆಂದು ಮನನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು. ಸುಮಾರು 4 ವರ್ಷಗಳಿಂದ ಲೋಕಯ್ಯರವರು ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು ಆರೋಗ್ಯ ಏರುಪೇರಾಗಿ ಹದಗೆಟ್ಟು ನಿತ್ರಾಣಗೊಂಡಿದ್ದರು. ಪತ್ನಿ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಬಂದ ವೇಳೆ ಮನೆಯ ಹಾಲ್ ನಲ್ಲಿ ಪತಿ ಬಿದ್ದುಕೊಂಡಿದ್ದು , ಅವರ ಬಾಯಿಯಿಂದ ಬಿಳಿ ನೊರೆ ಬಂದಿದ್ದು , ಘಾಟು ವಾಸನೆ ಬರುತ್ತಿದ್ದು, ಮುಟ್ಟಿ ನೋಡಿದಾಗ ಮೈ ತಣ್ಣಗಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!