- Advertisement -
- Advertisement -
ಕಡಬ: ವ್ಯಕ್ತಿಯೋರ್ವರು ಕುಮಾರಧಾರ ನದಿಗೆ ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ವರದಿಯಾಗಿದೆ.
ನಾಪತ್ತೆಯಾದ ವ್ಯಕ್ತಿ ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ (67) ಎನ್ನಲಾಗಿದೆ. ಸೆ. 21ರಂದು ಮಧ್ಯಾಹ್ನ ವೇಳೆಗೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಹೇಳಿ ಹೋದವರು ಕಾಣೆಯಾಗಿದ್ದಾರೆ. ಆ ಬಳಿಕ ಸ್ಥಳೀಯರು ಹುಡುಕಾಟ ಆರಂಭಿಸಿದ್ದು, ಪೊಲೀಸರಿಗೂ ಮಾಹಿತಿ ರವಾನೆಯಾಗಿದೆ ಎಂದು ತಿಳಿದುಬಂದಿದೆ.
- Advertisement -