Tuesday, April 30, 2024
spot_imgspot_img
spot_imgspot_img

ಕಡಬ: ನೂಚಿಲ ಗುಡ್ಡ ಕುಸಿಯುವ ಭೀತಿ; 8 ಕುಟುಂಬಗಳ ತುರ್ತು ಸ್ಥಳಾಂತರ

- Advertisement -G L Acharya panikkar
- Advertisement -

ಕಡಬ : ದ.ಕ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಕ್ಷೇತ್ರದಿಂದ ಅನತಿ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಭೀತಿ ಇರುವ ಹಿನ್ನೆಲೆಯಲ್ಲಿ ಇಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಧಳಾಂತರಿಸಲಾಗಿದೆ.

ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ತಕ್ಷಣವೇ ಮನೆಗಳಿಂದ ತೆರವಾಗಿ ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದ್ದರು.

ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಈ ಕೈಗೊಳ್ಳಲಾಗಿದೆ. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ತಪ್ಪಲಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚನೆ ನೀಡಲಾಗಿದೆ.

ಎಸ್‌ಡಿಆರ್‌ಎಫ್ ತಂಡ ಸ್ಥಳ ಪರಿಶೀಲಿಸಿ ತಾಲೂಕು ಆಡಳಿತಕ್ಕೆ ಅಪಾಯದ ಕುರಿತಂತೆ ಮಾಹಿತಿ ನೀಡಿತ್ತು.

- Advertisement -

Related news

error: Content is protected !!