- Advertisement -
- Advertisement -
ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಡಬ ಸಮೀಪದ ರೆಂಜಿಲಾಡಿ ಗ್ರಾಮದಲ್ಲಿ ನಡೆದಿದೆ.
ರೆಂಜಿಲಾಡಿ ಗ್ರಾಮದ ನಿಡ್ಮೇರು ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ (18) ಮೃತ ವಿದ್ಯಾರ್ಥಿನಿ.
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈಕೆ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ ಎನ್ನಲಾಗಿದೆ.
ಆರೋಗ್ಯವಾಗಿದ್ದ ಈಕೆ ಗುರುವಾರ ರಾತ್ರಿ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿರುವುದಾಗಿ ತಿಳಿದು ಬಂದಿದೆ. ಬೆಳೆದು ನಿಂತಿದ್ದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -