Wednesday, May 8, 2024
spot_imgspot_img
spot_imgspot_img

ಕಡಬ: ಸಹಕಾರಿ ಸಂಘದ ಅಧ್ಯಕ್ಷ ನದಿಗೆ ಹಾರಿ ಆತ್ಮ,ಹತ್ಯೆ..!

- Advertisement -G L Acharya panikkar
- Advertisement -

ಕಡಬ: ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯಲ್ಲಿ ಈ ಘಟನೆ ನಡೆದಿದೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!