Sunday, June 29, 2025
spot_imgspot_img
spot_imgspot_img

ಕಡಬ: ಪದವಿ ಓದಿದರೂ ಕೆಲಸ ಸಿಗದೇ ಮನನೊಂದು ಯುವತಿ ಆತ್ಮಹತ್ಯೆ.!

- Advertisement -
- Advertisement -

ಕಡಬ :ಪದವಿ ಶಿಕ್ಷಣ ಪಡೆದರೂ ಸರಿಯಾದ ಉದ್ಯೋಗ ಲಭಿಸದ ಹಿನ್ನೆಲೆಯಲ್ಲಿ ಮನ ನೊಂದು ಯುವತಿಯೊರ್ವಳು ಅತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಬುಧವಾರ ನಡೆದಿದೆ.

ಪರಂಗಾಜೆ ಬಾಬು ಗೌಡ ಎಂಬುವವರ ಪುತ್ರಿ ಭವ್ಯ ಪಿ ಬಿ (27)  ಅತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಎಕಾಂ ಪದವಿದರೆಯಾಗಿದ್ದು, ತನ್ನ ಅರ್ಹತೆಗೆ ತಕ್ಕುದಾದ ಉದ್ಯೋಗ ಸಿಕ್ಕಿಲ್ಲ,  ಹಲವು ಉದ್ಯೋಗಕ್ಕೆ ಪ್ರಯತ್ನಿಸಿ ವಿಫಲರಾಗಿದ್ದರು.

ಇದರಿಂದ ಮಾನಸೀಕ ಖಿನ್ನತೆಗೆ ಒಳಗಾಗಿ  ಮನೆಯೊಳಗಿನ ಫ್ಯಾನ್ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈಕೆಯ ಸಹೋದರ ಉಮೇಶ್  ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!