Saturday, June 28, 2025
spot_imgspot_img
spot_imgspot_img

ಕಡಬ: ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ ಆಟೋ ಚಾಲಕ..!

- Advertisement -
- Advertisement -

ಕಡಬ: ನದಿಗೆ ಹಾರಿದ ಯುವತಿಯೋರ್ವಳನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಕಡಬ ಆಲಂಕಾರು ಸಮೀಪದ ಶಾಂತಿಮೊಗರಿನಲ್ಲಿ ನಡೆದಿದೆ.

ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಯುವತಿಯು ತನ್ನ ಸ್ಕೂಟಿ ನಿಲ್ಲಿಸಿ ಹಾರಿದ್ದಾಳೆ. ಈ ವೇಳೆ ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಆಕೆ ಬದುಕುಳಿದಿರುವುದಾಗಿ ವರದಿಯಾಗಿದೆ. ಇನ್ನು ಯುವತಿ ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಇನ್ನು ಯುವತಿ ಒಂದೆಡೆ ಕಾಣಿಯೂರು ಗ್ರಾಮ ನಿವಾಸಿ ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ಲಭ್ಯವಾಗಿಲ್ಲ. ಮತ್ತೊಂದು ಮಾಹಿತಿ ಪ್ರಕಾರ ಯುವತಿಯು ಬಲ್ಯ ಎಂಬಲ್ಲಿನ ನಿವಾಸಿ ಎನ್ನಲಾಗುತ್ತಿದೆ.

ಸದ್ಯ ಯುವತಿಯನ್ನು ಪೊಲೀಸರು ಕಡಬ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಯುವತಿ ನದಿಗೆ ಹಾರಿರಬಹುದೆಂಬುದು ಪೊಲೀಸರ ತನಿಖೆ ಮೂಲಕ ತಿಳಿದುಬರಬೇಕಿದೆ.

- Advertisement -

Related news

error: Content is protected !!