![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2024/04/VC_PUC_-1-819x1024.jpg)
![](https://vtvvitla.com/wp-content/uploads/2024/04/shri-energy-solar-667x1024.jpeg)
![](https://vtvvitla.com/wp-content/uploads/2024/04/sanvi-creative-893x1024.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2022/01/indane-gas-2-1024x748.jpg)
ಕಡಬ: ಚಾಲಕನೋರ್ವ ಕಾರನ್ನು ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಸಿದ ಪರಿಣಾಮ ಕಾರು ರಸ್ತೆಯ ಬದಿಯಲ್ಲಿರುವ ನೀರಿನ ಕಣಿಗೆ ಬಿದ್ದು ಕಾರಿನಲ್ಲಿದ್ದ ಓರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ವಿರುಪಾಕ್ಷ (40) ಎಂದು ಗುರುತಿಸಲಾಗಿದೆ.
ಸ್ನೇಹಿತರೆಲ್ಲರೂ ಕಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ತಲುಪಿದಾಗ, ಕಾರನ್ನು ಚಲಾಯಿಸುತ್ತಿದ್ದ ಸಂತೋಷ್ ಎಂಬಾತನು, ತೀರಾ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಸಿದ ಪರಿಣಾಮ, ಕಾರು ರಸ್ತೆಯ ಬದಿಯಲ್ಲಿರುವ ನೀರಿನ ಕಣಿಗೆ ಬಿದ್ದಿರುತ್ತದೆ.
ಘಟನೆಯಲ್ಲಿ ಕಾರಿನಲ್ಲಿದ್ದ ವಿರುಪಾಕ್ಷ ಎಂಬವರು ಗಂಭೀರ ಗಾಯಗೊಂಡಿದ್ದು, ಕಾರಿನಲ್ಲಿದ್ದ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಂಭೀರ ಗಾಯಗೊಂಡ ವಿರುಪಾಕ್ಷರವರನ್ನುಆಸ್ಪತ್ರೆಗೆ ಕರೆತಂದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುದಾಗಿ ತಿಳಿಸಿರುತ್ತಾರೆ. ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.