- Advertisement -
- Advertisement -
ಕಡಬ: ಚಾಲಕನ ನಿಯಂತ್ರಣ ತಪ್ಪಿ ಬೆಳ್ಳಂಬೆಳಗ್ಗೆ ರಿಡ್ಜ್ ಕಾರೊಂದು ರಸ್ತೆ ಬದಿಯ ಹೊಳೆಗೆ ಬಿದ್ದು ಓರ್ವ ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಅಡ್ಡಹೊಳೆ ಎಂಬಲ್ಲಿ ದುರ್ಘಟನೆ ನಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್ (44) ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಚಾಲಕ ಗೋಪಿ (45) ಎಂಬವರಿಗೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಸ್ಥಳದಲ್ಲಿ ನೆಲ್ಯಾಡಿ ಹೊರಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -