- Advertisement -
- Advertisement -
ಕಡಬ: ಕೆಲಸಕ್ಕೆಂದು ಮನೆಯಿಂದ ಹೋದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತ್ತೂರು ಗ್ರಾಮದ ಓಟೆಕಜೆ ಸಿಆರ್ಸಿ ಕಾಲೋನಿ ನಿವಾಸಿ ಮಂಜುಳಾ ಎಂಬವರು ಕಾಣೆಯಾದ ಮಹಿಳೆ.
ಈ ಬಗ್ಗೆ ಮಹಿಳೆಯ ಪತಿ ಶಿವಕುಮಾರ್ ಅವರು ಠಾಣೆಗೆ ದೂರು ನೀಡಿದ್ದು ತಾನು ಬಿಳಿನೆಲೆಯ ರಬ್ಬರ್ ಕಾರ್ಖಾನೆಯಲ್ಲಿ ಚಾಲಕ ಕೆಲಸ ಮಾಡಿಕೊಂಡಿದ್ದು ಪತ್ನಿ ಬಿಳಿನೆಲೆಯ ನೆಟ್ಟಣದಲ್ಲಿರುವ ಅಂಗಡಿಯೊಂದರಲ್ಲಿ ವಾಹನ ಇನ್ಸೂರೆನ್ಸ್ ಏಜೆನ್ಸಿಯಾಗಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿಸಿದ್ದಾರೆ. ಆ.25ರಂದು ಮುಂಜಾನೆ ಪತಿ ಕೆಲಸಕ್ಕೆ ಹೋಗಿಬರುವುದಾಗಿ ಅತ್ತೆ-ಮಾವನವರಿಗೆ ಹೇಳಿ ಮನೆಯಿಂದ ಹೋಗಿದ್ದರು. ಬಳಿಕ ಹೆಂಡತಿಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಮೊಬೈಲ್ ಫೋನ್ ಸ್ವೀಚ್ ಆಪ್ ಆಗಿರುತ್ತದೆ. ಮನೆಯಲ್ಲಿ ಹಾಗೂ ಕೆಲಸ ಮಾಡುವ ಪ್ರದೇಶದಲ್ಲಿ ಪತ್ನಿ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ .ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -