Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ : ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆ; ಕೋವಿ, ಮಾಂಸ ಅರಣ್ಯಾಧಿಕಾರಿಗಳ ವಶಕ್ಕೆ

- Advertisement -
- Advertisement -

ಉಪ್ಪಿನಂಗಡಿ : ಮಗನ ಹುಟ್ಟುಹಬ್ಬಕ್ಕಾಗಿ ರಕ್ಷಿತಾಣಾರಣ್ಯದಿಂದ ಕಡವೆಯನ್ನು ಬೇಟೆಯಾಡಿ ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ವಶಪಡಿಸಿಕೊಂಡಿದೆ.

ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದನ್ನು ಗುಂಡಿಕ್ಕಿ ಕೊಂದಿದ್ದರು. ಬಳಿಕ ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಫ್ರಿಡ್ಜ್ ನಲ್ಲಿ ಸಂಗ್ರಹಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್‌, ಶಿವಾನಂದ ಅ‌ವರ ತಂಡ ಸುರೇಶ್‌ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ.

- Advertisement -

Related news

error: Content is protected !!