Saturday, June 20, 2026
spot_imgspot_img
spot_imgspot_img

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನಕ್ಕೆ ಕದ್ರಿ ಕದಲಿ ಜೋಗಿ ಮಠಾಧಿಶ್ವರ ಶ್ರೀ ನಿರ್ಮಲನಾಥ್ ಜೀ ಮಹಾರಾಜ್ ಭೇಟಿ; ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -
- Advertisement -

ಮೊಗರ್ನಾಡು ಸಾವಿರ ಸೀಮೆ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತಿಮಹಾರುದ್ರ ಯಾಗದ ಪೂರ್ವ ತಯಾರಿ ವೀಕ್ಷಣೆಗೆ ಕದ್ರಿ ಕದಲಿ ಜೋಗಿ ಮಠಾಧಿಶ್ವರ ಶ್ರೀ ನಿರ್ಮಲನಾಥ್ ಜೀ ಮಹಾರಾಜ್ ಭೇಟಿ ನೀಡಿದರು.

ಇಂದಿನ ರುದ್ರಪಾರಾಯಣದ ಕಾರ್ಯಕ್ರಮವನ್ನು ಕದ್ರಿ ಕದಲಿ ಜೋಗಿ ಮಠಾಧಿಶ್ವರ ಶ್ರೀ ನಿರ್ಮಲನಾಥ್ ಜೀ ಮಹಾರಾಜ್ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸ್ವಾಮೀಜಿಯ ಪುಣ್ಯ ಹಸ್ತದ ಮೂಲಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ರಘುನಾಥ್ ಸೋಮಯಾಜಿ, ಕಾರ್ಯಧ್ಯಕ್ಷ ಜಗನ್ನಾಥ ಚೌಟ, ಸಂತೋಷ್ ಶೆಟ್ಟಿ ಅರೆಬೆಟ್ಟು ದುರ್ಗಂಬಾ ಕನ್ಸ್ಟ್ರಕ್ಷನ್, ಶಂಕರನಾರಾಯಣ ಭಟ್ ಕೆಲಿಂಜ, ಯುವಕ ಮಂಡಲ ಬಾಳ್ತಿಲ, ಓಡಿಯೂರು ಶ್ರೀ ಗ್ರಾಮ ವಿಕಾಶ ಕಲ್ಲಡ್ಕ ಘಟಕದ ಸದಸ್ಯರು, ಶಂಭುಗ ಫ್ರೆಂಡ್ಸ್ ಶಂಭುಗ, ಯಾಗ ಸಮಿತಿ ಸದಸ್ಯರು, ಮುಖಂಡರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!