- Advertisement -
- Advertisement -
ಕೈಕಂಬ: ಟಿಪ್ಪರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರು -ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗಂಜಿಮಠದ ಮುಚ್ಚಾರು ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಎಚ್ಡಿಎಫ್ಸಿ ಬ್ಯಾಂಕಿನ ಉದ್ಯೋಗಿ, ಗುರುಪುರ ಹೊಸಮನೆ ನಿವಾಸಿ ಸಚಿನ್ ಕುಮಾರ್ ಆಚಾರ್ಯ (33) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಚಿನ್ ಸಂಜೆ ಕೆಲಸ ಮುಗಿಸಿ ಗುರುಪುರಕ್ಕೆ ಬರುತ್ತಿದ್ದಾಗ ಇವರ ಬೈಕನ್ನು ಓವರ್ಟೇಕ್ ಮಾಡುವ ಭರದಲ್ಲಿ ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬರುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಸಚಿನ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅವಿವಾಹಿತರಾಗಿದ್ದ ಸಚಿನ್ ತಂದೆ-ತಾಯಿ, ಓರ್ವ ಸಹೋದರಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
- Advertisement -