Friday, March 29, 2024
spot_imgspot_img
spot_imgspot_img

ಗ್ರಾ. ಪಂ ಚುನಾವಣೆಯಲ್ಲಿ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವ ಪಂಚಾಯತಿಗೆ 1 ಕೋಟಿ ರೂ!!

- Advertisement -G L Acharya panikkar
- Advertisement -

ಕಲಬುರಗಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವ ಕಲ್ಯಾಣ ಕರ್ನಾಟಕ ಭಾಗದ ಪಂಚಾಯಿತಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮಂಡಳಿ ಅಧ್ಯಕ್ಷರಾದ ಕಲಬುರ್ಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಘೋಷಿಸಿದ್ದಾರೆ.

ಈ ಯೋಜನೆಯು ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಎಲ್ಲ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದ ಪಂಚಾಯಿತಿಗೆ ಅನ್ವಯಿಸುತ್ತದೆ. ಇದರಂತೆ ಮಂಡಳಿಯಿಂದ 1 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

- Advertisement -

Related news

error: Content is protected !!