- Advertisement -
- Advertisement -
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್-ವಿಟ್ಲ ಸೀಮೆ ಇದರ ಆರನೇ ವಾರ್ಷಿಕ ಉತ್ಸವದ ಪ್ರಯುಕ್ತ ಒಡಿಯೂರು ಶ್ರೀ, ಮಾಣಿಲ ಶ್ರೀ ಹಾಗೂ ಕಣಿಯೂರು ಶ್ರೀ ಇವರುಗಳ ದಿವ್ಯ ಉಪಸ್ಥಿತಿಯಲ್ಲಿ ಜ.14 ರಂದು ಆದಿತ್ಯವಾರ ಬೆಳಿಗ್ಗೆಯಿಂದ ಸಂಜೆವರೆಗೆ ಅರ್ಧ ಏಕಾಹ ಭಜನೆ ನಡೆಯಲಿದೆ.
ಸಂಜೆ ಗಂಟೆ 5ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮತ್ತು ಭಜನಾ ಉಲ್ಪೆ ಮೆರವಣಿಗೆ ಹಾಗೂ ಜಾತ್ರೆಯ ಪ್ರತೀ ದಿನ ಭಜನಾ ಸೇವೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -