- Advertisement -
- Advertisement -
ಕಲಬುರಗಿ: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕರ್ನಾಟಕದ ಉತ್ತರ ಭಾಗದಲ್ಲಿ ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಿಲ್ಲೆಯ ಹಲವು ಜನವಸತಿ ಪ್ರದೇಶಗಳು ಜಲಾವೃತಗೊಂಡಿವೆ.
ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಏರುಗತಿಯಲ್ಲಿಯೇ ಇದ್ದು, ನೆರೆ ಸಂತ್ರಸ್ತರ ರಕ್ಷಣೆಗಾಗಿ ಜಿಲ್ಲೆಗೆ ಸೇನಾ ಪಡೆ ದೌಡಾಯಿಸಿದೆ. ತೆಲಂಗಾಣದ ಸಿಕಂದರಾಬಾದ್ನಿಂದ ಪ್ರವಾಹ ಪೀಡಿತರ ನೆರವಿಗೆ ಜಿಲ್ಲೆಗೆ ಆಗಮಿಸಿರುವ ಮೇಜರ್ ಮಾರ್ಟಿನ್ ಅರವಿಂದ್ ನೇತೃತ್ವದ 98 ಜನರ ಸೇನಾ ಪಡೆ.. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಂತ್ರಸ್ತರುಗಳನ್ನು ರಕ್ಷಿಸಿ.. ಸುರಕ್ಷಿತ ಸ್ಥಳಕ್ಕೆ ರವಾನಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
- Advertisement -