ಕಲಬುರಗಿ: ಸಾರ್ವಜನಿಕ ಸ್ಥಳದಲ್ಲಿಯೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ 6 ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಆಕಾಶ್ ಜಾಧವ್, ಮುರ್ತುಜಾ, ಸಾಗರ್, ಶುಭಂ, ಅಭಿಷೇಕ್, ಕೌಶಿಕ್ ಎನ್ನಲಾಗಿದೆ. ಕೊಲೆ ಆರೋಪಿಗಳ ಪೈಕಿ ಐವರು ವಿದ್ಯಾರ್ಥಿಗಳಾಗಿದ್ದಾರೆ.
ನ. 4ರಂದು ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಭಿಷೇಕ್(24) ಕೊಲೆಯಾಗಿತ್ತು. ಕಲಬುರಗಿ ನಗರದ ವಿದ್ಯಾ ನಗರದ ನಿವಾಸಿ ಅಭಿಷೇಕ್ ನನ್ನು ದುಷ್ಕರ್ಮಿಗಳು ಬಸ್ ನಿಲ್ದಾಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ಇದನ್ನೂ ಓದಿ: ದೀಪಾವಳಿಯ ದಿನದಂದೇ ನಡೆಯಿತು ಘೋರ ಹತ್ಯೆ; ಪೊಲೀಸ್ ಪೇದೆಯ ಪುತ್ರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!
ಮೃತ ಅಭಿಷೇಕ್ ಪೊಲೀಸ್ ಕಾನ್ಸ್ಟೇಬಲ್ ಪುತ್ರ. ಅಭಿಷೇಕ್ ತಂದೆ ಕಲಬುರಗಿ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಾರೆ. ಕೊಲೆಯಾದ ಅಭಿಷೇಕ್ ಕೂಡ ರೌಡಿ ಶೀಟರ್. ಕಲಬುರಗಿ ನಗರದ ಅಶೋಕ ನಗರ ಸೇರಿದಂತೆ ಅನೇಕ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಕೇಸ್ ಗಳು ಅಭಿಷೇಕ್ ಮೇಲಿದ್ದವು. ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು, ಕಾರು ವಶಕ್ಕೆ ಪಡೆಯಲಾಗಿದೆ.