Thursday, July 23, 2026
spot_imgspot_img
spot_imgspot_img

ಕಲ್ಲಡ್ಕ: ತಾಲೂಕು ಪಂಚಾಯತ್ ಸದಸ್ಯ ಮತ್ತು ಎ.ಎಸ್.ಐ ನಡುವೆ ಗಲಾಟೆ ಪ್ರಕರಣ: ಎ.ಎಸ್.ಐ ಯಿಂದ ತಾಲೂಕು ಪಂಚಾಯತ್ ಸದಸ್ಯನ ವಿರುದ್ಧ ಪ್ರತಿ ದೂರು

- Advertisement -
- Advertisement -

ಬಂಟ್ವಾಳ: ತಾಲೂಕು ಪಂಚಾಯತ್ ಸದಸ್ಯ ಮತ್ತು ಎ.ಎಸ್.ಐ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದೂರಿಗೆ ಪ್ರತಿದೂರು ದಾಖಲಾಗಿದೆ.

ತಾ.ಪಂ. ಸದಸ್ಯ ಮಹಾಬಲ ಆಳ್ವ ಅವರು ಬೆಳಿಗ್ಗೆ 9 ಗಂಟೆಯ ವೇಳೆ ಕಲ್ಲಡ್ಕದ ಪಂಚವಟಿ ಸಂಕೀರ್ಣದಲ್ಲಿರುವ ಮೆಡಿಕಲ್ ಸೆಂಟರ್ ಗೆ ಆಗಮಿಸುವ ವೇಳೆ ಬಂಟ್ವಾಳ ನಗರ ಪೋಲೀಸ್ ಠಾಣಾ ಎ.ಎಸ್.ಐ ಕುಂಜ್ಞಿ ಅವರು ಲಾಟಿಯಲ್ಲಿ ಹೊಡೆದಿದ್ದಾರೆ ಎಂದು ದೂರು ನೀಡಿದ್ದಾರೆ.

ಬೆಳಿಗ್ಗೆ 9 ಗಂಟೆಯ ವೇಳೆ ಕೋವಿಡ್ ನಿಯಮದಂತೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸುವಂತೆ ಪೋಲೀಸರು ಸೂಚನೆ ನೀಡುತ್ತಾ ಬರುವ ವೇಳೆ ಮಹಾಬಲ ಆಳ್ವ ಅವರಿಗೆ ಮನೆಗೆ ತೆರಳುವಂತೆ ಹೇಳಿ ಲಾಟಿಯಿಂದ ಹೊಡೆದಿದ್ದಾರೆ ಎಂದು ಅವರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಅವರು ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರರೋಗಿಯಾಗಿ ದಾಖಲಾಗಿದ್ದರು.

ಕೋವಿಡ್ ನಿಯಮ ಪಾಲನೆ ಮಾಡದೆ ಉಲ್ಲಂಘನೆ ಮಾಡಿದ್ದಲ್ಲದೆ ಕೋವಿಡ್ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೈಯಿಂದ ಹಲ್ಲೆ ಮಾಡಿದ್ದಾರೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಎ.ಎಸ್.ಐ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿ ಅದೇಶದಂತೆ ಜಿಲ್ಲೆಯಲ್ಲಿ ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಮಾತ್ರ ತೆರದು ಮುಚ್ಚಬೇಕು. ಈ ಬಗ್ಗೆ ನಮಗೆ ತಾಲೂಕು ಆಡಳಿತ ಸೂಚನೆ ನೀಡಿದ್ದು 9 ಗಂಟೆ ಬಳಿಕವೂ ಅಂಗಡಿಗಳ ಬಾಗಿಲಿನಿಂದ ತೆರಳದ ವರಿಗೆ ವಾರ್ನಿಂಗ್ ನೀಡುತ್ತಾ ಬರುತ್ತಿದ್ದ ವೇಳೆ ತಾಲೂಕು ಪಂಚಾಯತ್ ಸದಸ್ಯ ಮಹಾಬಲ ಆಳ್ವ ಅವರು ಪ್ರತಿರೋಧ ವ್ಯಕ್ತಪಡಿಸಿ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೈಯಿಂದ ಹಲ್ಲೆ ಮಾಡಿದ್ದಾರೆ ಎಂದು ಅವರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ತಾ.ಪಂ. ಸದಸ್ಯ ಹಾಗೂ ಪೋಲೀಸ್ ನಡುವಿನ ಗಲಾಟೆ ಬಳಿಕ ಕಲ್ಲಡ್ಕ ಪೇಟೆಯಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿ ಯುವಕರು ಗುಂಪು ಸೇರಿದ್ದು ಪೋಲಿಸರು ಮತ್ತು ಯುವಕರ ಮಧ್ಯೆ ವಾಗ್ವಾದ ನಡೆಯುವ ವೀಡಿಯೋ ವೈರಲ್ ಆಗಿತ್ತು.

driving
- Advertisement -

Related news

error: Content is protected !!