- Advertisement -
- Advertisement -
ಬಂಟ್ವಾಳ: ಕಾರು ಹಾಗೂ ಹೋಂಡಾ ಡಿಯೋ ನಡುವೆ ಢಿಕ್ಕಿ ಸಂಭವಿಸಿ ಡಿಯೋ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೆಲ್ಕಾರ್ ನಲ್ಲಿ ಶಾಮಿಯಾನ ಕೆಲಸ ಮಾಡುತ್ತಿದ್ದ ಮನೋಜ್ ಎಂಬ ಯುವಕ ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಡಿಯೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕ್ರೆಟಾ ಕಾರಿನ ಒಂದು ಭಾಗ ಹಾನಿಯಾಗಿದೆ.
ಬೆಳಿಗ್ಗೆ ಕಲ್ಲಡ್ಕದಲ್ಲಿ ಟ್ಯಾಂಕರ್ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇನ್ನೊಂದು ದುರ್ಘಟನೆ ಸಂಭವಿಸಿದೆ.
- Advertisement -