- Advertisement -
- Advertisement -
ಬಂಟ್ವಾಳ: ಅ 15 : ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ ಬೈಕ್ ಸವಾರ ಮೃತಪಟ್ಟಿದ್ದಾರೆ . ಮೆಲ್ಕಾರ್ ನಿವಾಸಿ ತಾರಾನಾಥ (35) ಮೃತಪಟ್ಟ ಬೈಕ್ ಸವಾರ.
ಬುಧವಾರ ಸಂಜೆ ವೇಳೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕ ಪೇಟೆಗೆ ತಾರಾನಾಥ ಅವರು ದ್ವಿಚಕ್ರವಾಹನದಲ್ಲಿ ಬರುವ ವೇಳೆ ಅಪಘಾತ ನಡೆದಿತ್ತು.
ಘಟನೆಯಲ್ಲಿ ತಾರಾನಾಥ ಅವರ ಹೊಟ್ಟೆಯ ಭಾಗಕ್ಕೆ ಗಾಯವಾಗಿದ್ದು ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಯಾಗದೆ ಇವರು ರಾತ್ರಿ ವೇಳೆ ಮೃತಪಟ್ಟಿದ್ದಾರೆ.
ಗುರುವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -