Friday, March 29, 2024
spot_imgspot_img
spot_imgspot_img

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬ ಆಚರಣೆ

- Advertisement -G L Acharya panikkar
- Advertisement -

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿಕೆಡ್ಡಸ ಹಬ್ಬವನ್ನುಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ- ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯೆದೆಲೆ ಇತ್ಯಾದಿಗಳನ್ನು ಭೂಮಿದೇವಿಯ ಸ್ನಾನಕ್ಕೋಸ್ಕರಇಟ್ಟು ಹುರುಳಿ, ಹೆಸರು ಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷ್ಯಗಳನ್ನು (ಸಾರ್ನಡ್ಡೆ) ಊರಿನ ಹಿರಿಯ ತಾಯಿಯಾದ ಜಯಂತಿಯವರು ಭೂಮಿಗೆಎಣ್ಣೆ ಹಾಲು ಹಾಕಿ ಬಡಿಸಿದರ.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ್ ಭಟ್‌ ಕಲ್ಲಡ್ಕ ಹಾಗೂ ಸಹಧರ್ಮಿಣಿಯಾದ ಡಾ| ಕಮಲಾ ಪ್ರಭಾಕರ್ ಭಟ್ ಹಾಗೂ ಪೋಷಕರಾದ ಯಶಸ್ವಿನಿ ಜೊತೆಗಿದ್ದರು. ಅಧ್ಯಾಪಕ ವೃಂದದವರು ಹಾಗೂ ಶಾಲಾ ಸಹಾಯಕಿ ಸುಮತಿ ಸಹಕರಿಸಿದರು.

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ಬಾಲಕೃಷ್ಣ, ಕೆಡ್ಡಸದ ಮಹತ್ವ ತಿಳಿಸುತ್ತಾ, “ತುಳುನಾಡಿನಲ್ಲಿ ವಾರ್ಷಿಕಾವರ್ತನದಲ್ಲಿಆಚರಣೆಯಾಗುವ ಒಂದು ಹಬ್ಬ. ಪೂರ್ವಿಕರು ಭೂಮಿಯನ್ನು ಹೆಣ್ಣೆಂದೇ ಪರಿಗಣಿಸಿ ಆರಾಧಿಸಿದವರು. ಅವರಎಲ್ಲಾಆಚರಣೆಯಲ್ಲೂ ಪ್ರಕೃತಿ ಪ್ರೇಮ, ಅಂತಃಕರಣ, ಮಾನವೀಯ ಸಂಬ0ಧಗಳು ಎದ್ದುಕಾಣುತ್ತದೆ. ಕೆಡ್ಡಸಆಚರಣೆಯನ್ನು ಭೂಮಿತಾಯಿಯ ಮೀಯುವ ಹಬ್ಬವೆಂದುಕರೆದು ಭೂಮಿಯನ್ನು ಸಾಮಾನ್ಯ ಸ್ತ್ರೀಯೆಂಬಂತೆ ಅವರು ಪರಿಭಾವಿಸಿದ್ದಾರೆ.

ಹೆಣ್ಣಿನಂತೆ ಭೂಮಿಯು ಮುಟ್ಟಾಗುತ್ತಾಳೆಂದು ಪರಿಗಣಿಸಿ, ಆ ನಂಬಿಕೆಯ ಪ್ರಕಾರ ಅವಳನ್ನು ಮಡಿಗೊಳಿಸುವ ದಿನವೆಂದು ಈ ಆಚರಣೆಯನ್ನು ನಡೆಸುತ್ತಾರೆ. ಕೆಡ್ಡಸ ಹಬ್ಬವನ್ನು ಶುರುಕೆಡ್ಡಸ, ನಡುಕೆಡ್ಡಸ ಹಾಗೂ ಕಡೆಕಡ್ಡಸಎಂದು ಮೂರು ದಿನ ಆಚರಿಸುತ್ತಾರೆ. ಈ ಮೂರು ದಿನನಡೆಯುವ ಹಬ್ಬದ ಆಚರಣೆಯಲ್ಲಿ ನೆಲ ಅಗೆಯುವುದು, ಮರಗಳನ್ನು ಕಡಿಯುವುದು ನಿಷಿದ್ದ. ಯಾಕೆಂದರೆ ಭೂಮಿ ರಜೋಮಯವಾಗಿರುವುದರಿಂದ ಕೃಷಿಕಾರ್ಯದಲ್ಲಿತೊಡಗಿದರೆ ಭೂಮಿಗೆ ನೋವಾಗುತ್ತದೆ ಎಂಬ ನಂಬಿಕೆಯಿದೆ.ಕೆಡ್ಡಸದ ಸಮಯದಲ್ಲಿ ಮೂಡಣ ದಿಕ್ಕಿನಿಂದ ಒ0ದು ವಿಲಕ್ಷಣವಾದ ಗಾಳಿ ಬೀಸುತ್ತದೆ. ಇದನ್ನುಕೆಡ್ಡಸದ ಗಾಳಿ ಎಂದುಕರೆಯುತ್ತಾರೆ.

ಈ ಸಂದರ್ಭಋತುಸ್ನಾನ ಮುಗಿಸಿರುವ ಭೂಮಿದೇವಿಯು ಈ ಗಾಳಿಯಿಂದ ಪುಳಕಗೊಂಡು ಫಲವತಿಯಾಗಲು ಸಜ್ಜಾಗುತ್ತಾಳೆ ಎಂಬ ನಂಬಿಕೆಯಿದೆ. ಪಕೃತಿ ಮಾತೆಯಾದ ಭೂಮಿದೇವಿಯನ್ನು ಪೂಜಿಸುವ ಈ ಹಬ್ಬವುಇಂದು ಸಂಪೂರ್ಣಮರೆತುಹೋಗುತ್ತಿರುವುದುಖೇದಕರ ಸಂಗತಿಯನ್ನು ತಿಳಿಸುತ್ತಾ ನಮ್ಮ ಮನೆ-ಮನೆಗಳಲ್ಲಿ ಆಚರಣೆಯನ್ನುಆಚರಿಸುವುದು ಮರೆತುಹೋದಲ್ಲಿ ಮುಂದೊ0ದು ದಿನ ಶ್ರೀರಾಮ ಶಾಲೆ ಅಥವಾ ‘ಗೂಗಲ್’ನಲ್ಲಿ ಹುಡುಕಿ ಹಬ್ಬಗಳ ಬಗ್ಗೆ ತಿಳಿಯುವ ಸಂದರ್ಭ ಬರಬಹುದೇನೋಅನ್ನಿಸುತ್ತದೆ. ಇನ್ನಾದರೂ ನಮ್ಮ ಪೂರ್ವಿಕರು ಹಬ್ಬ ಹರಿದಿನಗಳಿಗೆ ನೀಡಿದ ಮಹತ್ವ, ಹಿನ್ನಲೆಯನ್ನುಅರಿತು ಅವುಗಳನ್ನು ಸಾಧ್ಯವಾಗುವ ಮಟ್ಟಿಗೆಆಚರಿಸಲು ಪ್ರಯತ್ನಪಡೋಣ, ಎಲ್ಲರೂನಿಮ್ಮ ನಿಮ್ಮ ಮನೆಗಳಲ್ಲೂ ಈ ಹಬ್ಬವನ್ನುಆಚರಿಸಿ” ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಅತಿಥಿಗಳಿಗೆ ಎಲೆ –ಅಡಿಕೆ ನೀಡಿ ಸಾಂಪ್ರದಾಯಿಕವಾಗಿ ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು. ನಂತರ ೭ನೇ ತರಗತಿಯ ವಿದ್ಯಾರ್ಥಿನಿಯರು ಕೆಡ್ಡಸ ಕುರಿತಾದ ಹಾಡು ಹಾಡಿದರು.ಕಾರ್ಯಕ್ರಮದಲ್ಲಿ ಅಕ್ಷರ ಕೋಚಿಂಗ್ ಸೆಂಟರ್ ವತಿಯಿಂದ ನಡೆದ ಚಿತ್ರಕಲೆ ಹಾಗೂ ಚೆಸ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿಕೆಡ್ಡಸದ ವಿಶೇಷ ತಿನಿಸಾದ ನವವಿಧದ ಧಾನ್ಯಗಳಿಂದ ತಯಾರಿಸಿದ ನನ್ನೇರಿಯನ್ನು ಅತಿಥಿಗಳಿಗೆ ಮತ್ತು ವಿದ್ಯಾಥಿಗಳಿಗೆ ಹಂಚಲಾಯಿತು. ನನ್ನೇರಿ(ಕುಡು-ಅರಿ)ಯನ್ನು ತಿನ್ನುವುದರಿ0ದ ದೇಹದಲ್ಲಿ ಸಮಶೀತೋಷ್ಣವನ್ನು ಕಾಯ್ದುಕೊಂಡು ನೀರಿನ ಸಮತೋಲನ ಹಾಗೂ ಮೂಳೆಗಳು ಗಟ್ಟಿಮಾಡಲು ಸಹಾಯವಾಗುತ್ತದೆ ಎಂಬ ವೈಜ್ಞಾನಿಕ ಹಿನ್ನಲೆಯನ್ನು ಹೊಂದಿದೆ.

ವೇದಿಕೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿಭಾಗದ ಭೌತಶಾಸ್ತ್ರ ಉಪನ್ಯಾಸಕ ಸುಬ್ರಹ್ಮಣ್ಯ ಭಟ್ ಹಾಗೂ ರಸಾಯನಶಾಸ್ತ್ರ ಉಪನ್ಯಾಸಕ ಅಭಿಲಾಷ್ ಆಳ್ವ, ಪೋಷಕ ಭಾರತಿ, ಲತಾ, ಶ್ರೀದೇವಿ ಹಾಗೂ ಸಂಸ್ಕೃತ ಅಧ್ಯಾಪಕರಾದ ಅನ್ನಪೂರ್ಣ ಎನ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನುಅಧ್ಯಾಪಕ ಸುಮಂತ್ ಆಳ್ವ ಸ್ವಾಗತಿಸಿ, ಕಾವ್ಯಶ್ರೀ ನಿರೂಪಿಸಿ, ರೇಷ್ಮಾ ವಂದಿಸಿದರು.

- Advertisement -

Related news

error: Content is protected !!