- Advertisement -
- Advertisement -
ಬಂಟ್ವಾಳ ಡಿಸೆಂಬರ್ 16 : ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಇದರ ಸಂಯುಕ್ತ ಆಶ್ರಯದಲ್ಲಿ ‘ಯುವ ಸೌರಭ’ ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರಲ್ಲಿ ಅಯೋಜಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಿಜಿಸ್ಟ್ರಾರ್ ರಾಜೇಶ್ ಮತ್ತು ಸಂಸ್ಥೆಯ ಸಂಚಾಲಕರು ಉಪಸ್ಥಿತರಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವಿ ವಿದ್ಯಾರ್ಥಿಗಳು ಹಾಗೂ ಹಲವಾರು ಕಲಾವಿದರು ಭರತನಾಟ್ಯ, ನೃತ್ಯ ರೂಪಕ, ಹರಿಕಥೆ, ಕಂಗಿಲು ನೃತ್ಯ, ಹಾಲಾಕ್ಕಿ ನೃತ್ಯ, ಹುಲಿಕುಣಿತ, ಸುಗಮ ಸಂಗೀತ ಮುಂತಾದ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
- Advertisement -