- Advertisement -
- Advertisement -
ಮಂಗಳೂರು: ಆಶ್ರಯ ಯೋಜನೆಯಡಿ ಶಕ್ತಿನಗರ ಹಾಗೂ ಕಣ್ಣೂರಿನಲ್ಲಿ ನಿರ್ಮಾಣವಾಗಲಿರುವ ವಸತಿ ಸಮುಚ್ಚಯ ಯೋಜನೆಯ ಅನುಷ್ಠಾನ ಸಂಬಂಧಿಸಿ ಬ್ಯಾಂಕ್ ಅಧಿಕಾರಿಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಭೆ ನಡೆಸಿದರು.
ಸಭೆಯಲ್ಲಿ ಪ್ರಸ್ತುತ ನಿರ್ಮಾಣ ಮಾಡುತ್ತಿರುವ ವಿಸ್ತೀರ್ಣವನ್ನು ಹೆಚ್ಚಿಸಿ ಅದನ್ನು ಮೇಲ್ದರ್ಜೆಗೇರಿಸಿ ಸಾರ್ವಜನಿಕರಿಗೆ ವಿತರಿಸುವ ಸಂಬಂಧ ಹಾಗೂ ಹೆಚ್ಚುವರಿ ಖರ್ಚಿನ ಕುರಿತು ಬ್ಯಾಂಕ್ ಅಧಿಕಾರಿ ಹಾಗೂ ಇಲಾಖಾಧಿಕಾರಿಗಳ ಜೊತೆ ಚರ್ಚಿಸಲಾಯಿತು. ಹಾಗೂ ಫಲಾನುಭವಿಗಳಿಗೆ ಬ್ಯಾಂಕ್ ನಿಂದ ಯಾವುದೇ ಅಡಮಾನ ಪತ್ರ ಕೇಳದೆ ನಿವೇಶನಕ್ಕೆ ಬ್ಯಾಂಕ್ ಸಾಲ ಮಂಜೂರಾತಿಯ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.
- Advertisement -