



ಕಂಬಳಬೆಟ್ಟು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ವಿಧಾನ ಪರಿಷತ್ ಉಪ ಚುನಾವಣೆಯ ಪ್ರಚಾರ ಸಭೆಯು ಧರ್ಮನಗರ ಕಂಬಳಬೆಟ್ಟು ಸಮಾಜ ಮಂದಿರದಲ್ಲಿ ನಡೆಯಿತು.
ಕೋಟ ಶ್ರೀನಿವಾಸ ಪೂಜಾರಿಯವರು ಸಂಸದರಾದ ಕಾರಣ ಆ ಸ್ಥಾನಕ್ಕೆ ಉಪಚುನಾವಣೆ ಅಕ್ಟೋಬರ್ 21 ಕ್ಕೆ ನಿಗದಿಯಾಗಿತ್ತು.
ಇದೀಗ ಆ ಸ್ಥಾನಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಇವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದೀಗ ಉಪಚುನಾವಣೆಯ ಅಭ್ಯರ್ಥಿ ಪರ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ.


ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಇವರ ಅಧ್ಯಕ್ಷತೆಯಲ್ಲಿ ನಡೆದ ಪ್ರಚಾರ ಸಭೆ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಚುನಾವಣಾ ಸಹ ಸಂಚಾಲಕ ರಾಕೇಶ್ ಕೆಡೆಂಜಿ, ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತಾ, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಪುತ್ತೂರು ವಿಧಾನ ಸಭಾ ಚುನಾವಣಾ ಸಂಚಾಲಕ ನಿತೀಶ್ ಶಾಂತಿವನ, ಸಹ ಸಂಚಾಲಕ ಸಂತೋಷ್ ಕುಮಾರ್ ಕೈಕಾರ, ಎಸ್.ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜಾತ್ರೆ, ಪುತ್ತೂರು ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಅನಿಲ್ ತೆಂಕಿಲ, ಉಮೇಶ್ ಗೌಡ ಉಪಸ್ಥಿತರಿದ್ದರು.

ದಯಾನಂದ ಶೆಟ್ಟಿ ಉಜಿರೆಮಾರ್ ಸ್ವಾಗತಿಸಿ, ಮಂಡಲ ಕಾರ್ಯದರ್ಶಿ ಪುನೀತ್ ಮಾಡತ್ತಾರ್ ಕಾರ್ಯಕ್ರಮ ನಿರೂಪಿಸಿದರು. ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು ಧನ್ಯವಾದಗೈದರು.
ಪುಣಚ ಮಹಾ ಶಕ್ತಿ ಕೇಂದ್ರ ಮತ್ತು ವಿಟ್ಲ ಮಹಾ ಶಕ್ತಿ ಕೇಂದ್ರ ದ ಕಾರ್ಯಕರ್ತರು ಮತ್ತು ಪಂಚಾಯತ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.