Saturday, April 20, 2024
spot_imgspot_img
spot_imgspot_img

ನನ್ನ ಮನೆಯಂತೆ ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ:ಸಿಎಂ ಠಾಕ್ರೆ ವಿರುದ್ಧ ಕಂಗನಾ ಟ್ವೀಟ್.!

- Advertisement -G L Acharya panikkar
- Advertisement -

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈನ ಪ್ರತಿಷ್ಠಿತ ಪಾಲಿ ಹಿಲ್ ಪ್ರದೇಶದಲ್ಲಿರುವ ಕಂಗನಾ ರನೌತ್ ಮಣಿಕರ್ಣಿಕಾ ಫಿಲ್ಮ್ ಕಚೇರಿಯನ್ನು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ಒಡೆಯುತ್ತಿರುವುದಾಗಿ ಕಂಗನಾ ಟ್ವೀಟ್ ನಲ್ಲಿ ತಿಳಿಸಿದ್ದರು.

ಇಂದು ಮಧ್ಯಾಹ್ನ ಮುಂಬೈಗೆ ಬಂದಿಳಿದ ಕಂಗನಾ, ಟ್ವಿಟ್ಟರ್ ನಲ್ಲಿ ನೆಲಸಮವಾಗಿರುವ ಕಟ್ಟಡದ ವಿಡಿಯೋ ಹಾಕಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದೆ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ. 

ಪೊಲೀಸರ ಭದ್ರತೆಯೊಂದಿಗೆ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗನಾ ಕಚೇರಿಯನ್ನು ಧ್ವಂಸಗೊಳಿಸುತ್ತಿರುವ ವಿಡಿಯೋ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದು, ಮುಂಬೈ ಯಾರ ಆಸ್ತಿ ಎಂದು ಕಂಗನಾ ಮತ್ತೊಮ್ಮೆ ಕಿಡಿಕಾರಿದ್ದರು.ಈ ಕುರಿತು ನೇರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರಿಗೇ ಅವಾಜ್​ ಹಾಕಿದ್ದಾರೆ.

ಈ ಕುರಿತು ವಿಡಿಯೋ ಮಾಡಿರುವ ಅವರು, ‘ಸಿನಿಮಾ ಮಾಫಿಯಾ ಜತೆಗೆ ಸೇರಿಕೊಂಡು ನನ್ನ ಮೇಲೆ ಸೇಡು ತೀರಿಸಿಕಂಡೆ ಎಂದು ನಿಮಗೆ ಖುಷಿಯಾಗಿರಬಹುದು. ಇವತ್ತು ನನ್ನ ಮನೆ ಮುರಿದಿದೆ. ನಾಳೆ ನಿನ್ನ ಅಹಂಕಾರ ಮುರಿಯತ್ತೆ, ಸಮಯ ಖಂಡಿತಾ ಒಂದೇ ತರಹ ಇರುವುದಿಲ್ಲ.ಕಾಶ್ಮೀರಿ ಪಂಡಿತರ ಮೇಲೆ ಏನಾಗುತ್ತಿತ್ತು ಎಂಬುವುದು ಇಂದು ನನಗೆ ಅರ್ಥವಾಗಿದೆ. ನಾನು ಕೇವಲ ಅಯೋಧ್ಯೆ ಮಾತ್ರವಲ್ಲ, ಕಾಶ್ಮೀರದ ಕುರಿತು ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು ಮಾತು ನೀಡುತ್ತಾನೆ. ಸಿನಿಮಾಗಳ ಮೂಲಕ ದೇಶದ ಜನರನ್ನ ಎಚ್ಚರಿಸುವ ಕೆಲಸ ಮಾಡುತ್ತೇನೆ. ಈ ರೀತಿ ಕೆಲಸಗಳ ನಡೆಯುತ್ತಿರುವ ಬಗ್ಗೆ ಕೇಳಿದ್ದೆ. ಆದ್ರೆ ಇಂದು ನನ್ನೊಂದಿಗೆ ನಡೆದಿದೆ. ಉದ್ಧವ್ ಠಾಕ್ರೆಯ ಕ್ರೂರತ್ವದ ಭಯೋತ್ಪಾದನೆ ನನ್ನೊಂದಿಗೆ ನಡೆದಿರೋದು ಒಳ್ಳೆಯದು ಆಯ್ತು. ಕಾರಣ ಇದಕ್ಕೆ ಕೆಲ ಮಹತ್ವದ ಕಾರಣವಿದೆ. ಜೈ ಹಿಂದ್, ಜೈ ಮಹಾರಾಷ್ಟ್ರ.

- Advertisement -

Related news

error: Content is protected !!