- Advertisement -
- Advertisement -
ಕಾಣಿಯೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವರತಿ ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆಯ ಪದ್ಮಯ್ಯ ಗೌಡರ ಪುತ್ರಿ ದಿವ್ಯಾಶ್ರೀ (26) ಎಂದು ಗುರುತಿಸಲಾಗಿದೆ.
ಅಪಪ್ರಚಾರಕ್ಕೆ ಮನನೊಂದು ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
- Advertisement -