- Advertisement -
- Advertisement -
ಕಾಪು: ಇಲ್ಲಿನ ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ನ.25ರ ಗುರುವಾರ ಬೆಳಗ್ಗೆ ಸಂಭವಿಸಿದೆ.
ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದೆ. ಇದರಿಂದ ಅಂಗಡಿಯ ಒಂದುಬದಿಯ ಗೋಡೆ ಸಂಪೂರ್ಣ ದ್ವಂಸಗೊಂಡಿದೆ.
ಈ ವೇಳೆ ಅಂಗಡಿಯಲ್ಲಿದ್ದ ಮಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -