- Advertisement -
- Advertisement -


ಉಡುಪಿ: ವಿವಾಹಿತ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಚುಕ್ಕು ತೋಟ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34) ಎಂದು ಗುರುತಿಸಲಾಗಿದದೆ.
ಇವರು ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಪತಿಯ ಮನೆಯಲ್ಲಿದ್ದ ಇವರು ಮುಂಜಾನೆ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯ ಸಹಾಯದಿಂದ ಮಹಿಳೆಯ ವೃತ್ತ ದೇಹವನ್ನು ಮೇಲೆತ್ತಲಾಯಿತು. ಇವರಿಗೆ 7 ವರ್ಷ ಹಾಗೂ 1 ವರ್ಷ 9 ತಿಂಗಳ ಮಗುವಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -